ವಿಶ್ವ ಮಲೇರಿಯಾ ದಿನ ಜಾಗೃತಿ ಜಾಥಾ ಕಾರ್ಯಕ್ರಮ | ಯಾವುದೇ ಜ್ವರವಿರಲಿ ರಕ್ತ ಪರಿಕ್ಷೆ ಮಾಡಿಸಿಕೊಳ್ಳಿ, ಸಂಪೂರ್ಣ ಚಿಕಿತ್ಸೆ ಪಡೆದು ಮಲೇರಿಯಾದಿಂದ ಮುಕ್ತರಾಗಲು ಸಲಹೆ

ಯಾದಗಿರಿ: ಮಲೇರಿಯಾ ಎಂಬ ಪರಾವಲಂಬಿ ಸೋಂಕು ಹೆಣ್ಣು (ಅನಾಫಿಲಿಸ್) ಸೊಳ್ಳೆಯಿಂದ ಹರಡುತ್ತದೆ, ನಿಂತ ನೀರು ಸೊಳ್ಳೆಗಳ ತವರು, ಲಾರ್ವಹಾರಿ ಮಿನುಗಳಿಂದ ಸೋಳ್ಳೆ ಉತ್ಪತ್ತಿ ತಡೆಗಟ್ಟಿ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿರತ್ತದೆ, ಮಲೇರಿಯಾ ರೋಗ ಹರಡದಂತೆ ಮುಂಜಾಗೃತ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಗಳಾದ ಡಾ.ಮಹೇಶ ಬಿರಾದಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ವಿಶ್ವ ಮಲೇರಿಯಾ ದಿನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತೀವ್ರ, ಕೆಲವೊಮ್ಮೆ ಮಾರಕ ಕಾಯಿಲೆಗೆ ಕಾರಣವಾಗಬಹು ದು. ಪ್ಲಾಸ್ಮೋಡಿಯಂ ಪರಾವ ಲಂಬಿಗಳು ಸಂಕೀರ್ಣ ಜೀವನ ಚಕ್ರವನ್ನು ಪಡೆದು ಕೊಳ್ಳುತ್ತವೆ, ಆವರ್ತಕ ಜ್ವರಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ರೋಗಿಗಳು ಚಿಕಿತ್ಸೆಯ ನಂತರ ಮಲೇರಿಯಾ ಲಕ್ಷಣಗಳಿಂದ ಬೇಗನೆ ಚೇತರಿಸಿಕೊಳ್ಳುತ್ತಾರೆ, ಆದರೆ ಚಿಕಿತ್ಸೆ ವಿಳಂಬವಾದರೆ ತೀವ್ರ ಮಲೇರಿಯಾ ರಕ್ತಹೀನತೆ, ಸೆರೆಬ್ರಲ್ ಮಲೇರಿಯಾ, ಕೋಮಾ ಅಥವಾ ಸಾವು ಮುಂತಾದ ತೀವ್ರ ತೊಡಕುಗಳು ಸಂಭವಿಸಬಹುದು ಎಂದು ತಿಳಿಸಿದರು.

ಯಾವುದೇ ಜ್ವರವಿರಲಿ ರಕ್ತ ಪರಿಕ್ಷೆ ಮಾಡಿಸಿಕೊಳ್ಳಿ, ಸಂಪೂರ್ಣ ಚಿಕಿತ್ಸೆ ಪಡೆಯಿರಿ ಮಲೇರಿಯಾದಿಂದ ಮುಕ್ತರಾಗಿ, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ, ಸೋಳ್ಳೆ ಪರದೆ ಬಳಸಿ ಮಲೇರಿಯಾ ಓಡಿಸಿ, ಸ್ವಯಂ ರಕ್ಷಣಾ ವಿಧಾನ ಅನುಸರಿಸಿ ಮಲೇರಿಯಾದಿಂದ ಮುಕ್ತಿಹೊಂದಿ , ನೀರು ನಿಲ್ಲದಂತೆ ಸಹಕರಿಸಿ ಸೋಳ್ಳೆ ಉತ್ಪತ್ತಿ ತಡೆಗಟ್ಟಿ, ಕಡಿತ ಚಿಕ್ಕದು ಭೀತಿ ದೊಡ್ಡದು, ನಿಂತ ನೀರು ಸೊಳ್ಳೆಗಳ ತವರು, ಲಾರ್ವಹಾರಿ ಮಿನುಗಳಿಂದ ಸೋಳ್ಳೆ ಉತ್ಪತ್ತಿ ತಡೆಗಟ್ಟಿ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿರತ್ತದೆ. ಸಾರ್ವಜನಿಕರು ಮಲೇರಿಯಾ ರೋಗ ಹರಡದಂತೆ ಮುಂಜಾಗೃತ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ.ಮುಬಾಸ್ಸಿರ ಅಹ್ಮದ ಸಾಜೀದ ಮಾತನಾಡಿ ವಿಶ್ವ ಮಲೇರಿಯಾ ದಿನವು ವಾರ್ಷಿಕವಾಗಿ ಏಪ್ರಿಲ್ 25 ರಂದು ಆಚರಿಸಲಾಗುವ ಜಾಗತಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ವಾಗಿದ್ದು, ಮಲೇರಿಯಾವನ್ನು ಎದುರಿಸಲು ಮತ್ತು ನಿರ್ಮೂಲನೆ ಮಾಡಲು ಅಗತ್ಯವಾದ ಕ್ರಮವನ್ನು ಉತ್ತೇಜಿಸಲು ವಿವಿಧ ಸ್ಥಳೀಯ ಮತ್ತು ಸರ್ಕಾರಿ ಆರೋಗ್ಯ ಅಧಿಕಾರಿಗಳು ಮತ್ತು ನೀತಿ ನಿರೂಪಕರಿಗೆ ಜಾಗತಿಕ ಕರೆಯಾಗಿದೆ. ಜನರ ಅಮೂಲ್ಯ ಜೀವನ ಕಾಪಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಬನ್ನಿ ಮಲೇರಿಯಾವನ್ನು ಕೊನೆಗೋಳಿಸಲು ಸಿದ್ದರಾಗಿ, 2025 ರ ಧ್ಯೆಯ ವಾಕ್ಯ : ಮಲೇರಿಯಾ ನಮ್ಮೋಂದಿಗೆ ಕೊನೆಗೊಳ್ಳುತ್ತದೆ. ಮರು ಹುಡಿಕೆ ,ಮರುಕಲ್ಪನೆ, ಮರು ಪ್ರೇರೇಪಣೆಯಾಗಿರತ್ತದೆ ಎಂದರು.

ಜಾಗೃತಿ ಜಾಥಾ ಕಾರ್ಯಕ್ರಮವು ಗಾಂಧಿ ಚೌಕದಿಂದ ಆರಂಭವಾಗಿ ಪ್ರಮುಖ ಬೀದಿಗಳ ಮುಖಾಂತರ ಸಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಗಳಾದ ಕಾರ್ಯಾಲಯದ ಆವರಣದಲ್ಲಿ ಕೊನೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಶಾಂತಿಲಾಲ್,ನ.ಆ.ಪಾ ಕೇಂದ್ರದ ವೈದ್ಯಾಧಿಕಾರಿ ಡಾ.ವಿನುತಾ, ಕಛೇರಿ ಅಧೀಕ್ಷಕಿ ಅನಿತಾ, ತಾಲೂಕಾ ಆಶಾ ಮೆಂಟರ್ ಮಧುಲತಾ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಹಿರಾಲಾಲ್ ಚೌವ್ಹಾಣ, ಆರೋಗ್ಯ ನಿರಕ್ಷಣಾಧಿಕಾರಿ ಖುರ್ಶೀದ್, ಉಮೇಶ್, ಕಾಳಪ್ಪ ಪತ್ತಾರ, ಸಂತೋಶ್ ಜಾದವ್, ರವಿಬಂಡಿ, ಎಮ್‌ಟಿಎಸ್ ಖಲಿಮುದ್ದಿನ್, ಹಾಗೂ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಆಕ್ಸಫರ್ಡ ಪ್ಯಾರಾಮೆಡಿಕಲ್ ಕಾಲೇಜಿನ ಶಿಕ್ಷಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ವಿಬಿಡಿ ಸಲಹೆಗಾರ ಬಸವರಾಜ್ ಕಾಂತ ಸ್ವಾಗತಿಸಿದರು ಹಾಗೂ ಜಿಲ್ಲಾ ಆರೊಗ್ಯ ಶಿಕ್ಷಣಾಧಿಕಾರಿ ತುಳಸಿರಾಮ ಚವ್ಹಾಣ ವಂದಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!